ದೆಹಲಿ:
ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸತತ 3ನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳುವಲ್ಲಿ ವಿಫಲವಾಗಿ ವಿಪಕ್ಷಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ.20 ವರ್ಷಗಳಿಂದ ಅಧಿಕಾರದ ಅಜ್ಞಾತವಾಸ ಅನುಭವಿಸಿದ್ದ ಬಿಜೆಪಿ ಈಗ 40ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ದೆಹಲಿಯಲ್ಲಿ ಅಧಿಕಾರಕ್ಕೇರಲು ಸಜ್ಜಾಗಿದೆ.
ಒಂದು ಕಾಲದಲ್ಲಿ ಕೇಜ್ರಿವಾಲ್ ಗೆ ಮಾರ್ಗದರ್ಶಕರಾಗಿದ್ದ ಅಣ್ಣ ಹಜಾರೆ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.”ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ಉತ್ತಮವಾದ ಚಾರಿತ್ರ್ಯ ಇರಬೇಕು, ಉತ್ತಮ ಚಿಂತನೆಗಳು, ಐಡಿಯಾಗಳಿರಬೇಕು ಎಂದು ನಾನು ಈ ಹಿಂದಿನಿಂದ ಹೇಳುತ್ತಾ ಬಂದಿದ್ದೇನೆ. ಆದರೆ ಅದನ್ನು ಆಮ್ ಆದ್ಮಿ ಪಕ್ಷ ಅರ್ಥ ಮಾಡಿಕೊಳ್ಳಲಿಲ್ಲ.