ಬೆಂಗಳೂರು: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 30ಕ್ಕೂ ಹೆಚ್ಚು ಬೈಕ್ಗಳು ಬೆಂಕಿಗಾಹುತಿಯಾಗಿವೆ. ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್ ಚಾರ್ಜ್ ಆಗಿ ಸ್ಫೋಟಿಸಿದ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಕಟ್ಟಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.
ಕೂಲಿ ಮಾಡುವವರ ಹಣಕ್ಕೆ ಕನ್ನ ಹಾಕಿದ ಕಿರಾತಕರು; ಹಣ ಡಬಲ್ ಮಾಡಿಕೊಡೋದಾಗಿ 10 ಲಕ್ಷ ದೋಖಾ
ತುಮಕೂರು: ಹೊಟ್ಟೆಪಾಡಿಗಾಗಿ ಕೂಲಿ ಅರಸಿ ಬಂದು ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕರ ಖಾತೆಗೆ ಕನ್ನ ಹಾಕಿರುವ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಯುವಕರ ಖಾತೆಯಿಂದ ಖದೀಮರು 10 ಲಕ್ಷ ರೂ.ಗಳನ್ನು ಎಗರಿಸಿದ್ದಾರೆ.
ಜಯನಗರದಲ್ಲಿ ವಾಸವಿರುವ ಯಾದಗಿರಿ ಜಿಲ್ಲೆಯ ಯುವಕರು ಸೈಬರ್ ವಂಚಕರ ಬಲೆಗೆ ಬಿದ್ದು ಸಂಕಷ್ಟ ಎದುರಿಸುತ್ತಿದ್ದಾರೆ. ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಮೋಸ ಹೋದವರು.
ಸಂಗಮೇಶ್ ಎಂಬಾತ COSTA ಎಂಬ ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು ಹಣ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ತಿಳಿಸಿದ್ದ. ಅದರಂತೆ ಹಲವು ಮಂದಿ ಹಣ ಹಾಕಿ 10 ಲಕ್ಷ ಕಳೆದುಕೊಂಡಿದ್ದೇವೆ ಎಂದು ಯುವಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೊದಲ ಬಾರಿಗೆ 9,800 ಜಮಾ ಮಾಡಿದ್ದು, ನನ್ನ ಖಾತೆಗೆ 11 ಸಾವಿರ ವಾಪಸ್ ಹಾಕಿದ್ದರು. ಇದನ್ನು ನಂಬಿ ಬೇರೆಯವರಿಂದ ಹಣ ಪಡೆದು 5.18 ಲಕ್ಷ ಹಣವನ್ನು COSTA ಆ್ಯಪ್ನಲ್ಲಿ ಜಮಾ ಮಾಡಿದೆ. ನನ್ನ ಜತೆಗೆ ಕೆಲಸ ಮಾಡುತ್ತಿರುವ ಅಂಬರೀಶ್, ಶರಣಗೌಡ, ಆನಂದ, ಶಾಂತಪ್ಪ ಇತರರು ಸುಮಾರು 10 ಲಕ್ಷ ಹಣ ವರ್ಗಾಯಿಸಿದ್ದಾರೆ. ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಸುರಪುರದ ತಿಪ್ಪಣ್ಣ ನಗರದ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Physical abuse: 15 ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಲು ಪ್ರಿಯಕರನಿಗೆ ಸಹಕರಿಸಿದ ತಾಯಿ!